Please enable javascript.Karnataka Et Pst Exam Postpone,ಪಿಎಸ್‌ಐ, ಆರ್‌ಎಸ್‌ಐ ಹುದ್ದೆಗಳ ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆ ಮುಂದೂಡಿಕೆ - karnataka psi and rsi et pst examinations are extended - Vijay Karnataka

ಪಿಎಸ್‌ಐ, ಆರ್‌ಎಸ್‌ಐ ಹುದ್ದೆಗಳ ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆ ಮುಂದೂಡಿಕೆ

Vijaya Karnataka | 12 Sep 2020, 8:19 pm
Subscribe

ನಾಗರಿಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ರಿಸರ್ವ್‌ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಸಿಎಆರ್ / ಡಿಎಆರ್‌ (ಸೇವಾನಿರತ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ...

ಪಿಎಸ್‌ಐ, ಆರ್‌ಎಸ್‌ಐ ಹುದ್ದೆಗಳ ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆ ಮುಂದೂಡಿಕೆ
karnataka et pst exam postpone
ನಾಗರಿಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ರಿಸರ್ವ್‌ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಸಿಎಆರ್ / ಡಿಎಆರ್‌ (ಸೇವಾನಿರತ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳಿಗೆ ನಿಗದಿಪಡಿಸಿದ ದೈಹಿಕ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪಿಎಸ್‍ಐ ಮತ್ತು ಆರ್‍ಎಸ್‍ಐ ಸಿಎಆರ್/ಡಿಎಆರ್(ಸೇವಾನಿರತ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳನ್ನು ಸೆಪ್ಟೆಂಬರ್ 07 ರಿಂದ 11 ರವರೆಗೆ ಹಾಗೂ ಸೆಪ್ಟೆಂಬರ್ 14 ರಂದು ಒಟ್ಟು 6 ದಿನಗಳ ಕಾಲ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ಕೆಎಸ್‌ಪಿ ಇಂದ ನಿರ್ದೇಶನ ನೀಡಲಾಗಿತ್ತು. ಆದರೆ ದಾವಣಗೆರೆಯಲ್ಲಿ ಸೆ.08 ರಂದು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕ್ರೀಡಾಂಗಣದಲ್ಲಿ ಅತಿಯಾದ ತೇವಾಂಶವಿರುವುದರಿಂದ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳ ಚಟುವಟಿಕೆಗಳನ್ನು ನಡೆಸಲು ಅನುಕೂಲಕರವಾಗಿಲ್ಲದ ಕಾರಣ ಈ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಅಲ್ಲದೇ ಇನ್ನೂ 5-6 ದಿನಗಳ ಕಾಲ ಅತಿಯಾಗಿ ಮಳೆಯಾಗುವ ಸಂಭವಿರುವುದರಿಂದ ಸೆ.09 ರಿಂದ ಸೆ.11 ರವರೆಗೆ ನಡೆಸಬೇಕಿದ್ದ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳನ್ನು ನಡೆಸಲು ಕಷ್ಟ ಸಾಧ್ಯಾವಾಗಬಹುದು. ಕಾರಣ ಈ ಪರೀಕ್ಷೆಗಳನ್ನು ಸೆ.15 ರಿಂದ 21 ರವರೆಗೆ ನಡೆಸಲು ನಿರ್ಧರಿಸಲಾಗಿರುತ್ತದೆ. ಆದಕಾರಣ ಪರೀಕ್ಷೆಗೆ ಹಾಜರಾಗಬೇಕಿದ್ದ ಅಭ್ಯರ್ಥಿಗಳು, ಇಲಾಖೆಯ ಅಧಿಕೃತ ವೆಬ್‌ಸೈಟ್‌ http://rsi20.ksp-online.in/ ಗೆ ಭೇಟಿ ನೀಡಿ ಇಟಿ/ಪಿಎಸ್‍ಟಿ ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಈಗಾಗಲೇ ಸೂಚಿಸಿರುವಂತೆ ನಿಗದಿತ ಸಮಯಕ್ಕೆ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕೆಂದು ಪೊಲೀಸ್ ಮಹಾ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಣ್ಣುಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಡಿಪ್ಲೊಮ ಪ್ರವೇಶಾತಿ: ಅರ್ಜಿ ಆಹ್ವಾನ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ